click to play
ಉರಿವ ಬಿಸಿಲಿರಲಿ ಕೊರೆವ ಚಳಿ ಇರಲಿ
ನಮ್ಮ ಮನದೊಳಿರಲಿ ನಿನ್ನ ಧ್ಯಾನ
ಶರಣರ ನೆಲವೇ ತರುಣರ ಛಲವೇ
ನಿನ್ನ ಚರಣತಲಕೆ ನಮ್ಮ ಪ್ರಾಣ
ಊನವಾಗಿ ನಿನ್ನ ಮಾನ
ಓ ನಾವು ಜೀವಿಸಿದ್ದ ಫಲವೇನಾ ?
ದೇವರ ನೆಲವೇ ಕಾಯ್ವರ ಫಲವೇ
ನಿನ್ನ ನೇರ ಬಿರಿಸಿ ನಮ್ಮ ಪ್ರಾಣ
ಹೊಟ್ಟೆ ಹೊರೆಯಲು ರಟ್ಟೆ ಬೀಸುವ
ನಾವು ಹಿಟ್ಟಿನಾಳ್ಗಳಲ್ಲ
ಹುಟ್ಟಿನಿಂದ ನಿನ್ನ ಹೊರೆವ ಹೊಣೆ ಹೊತ್ತ
ದಿಟ್ಟರಾರು ಶಿವ ಬಲ್ಲ
ನಿನ್ನ ಮುಟ್ಟಿ ಬಹಕೆ ಬದುಕಿಲ್ಲ
ಧೀರರ ನಾಡೆ ವೀರರ ಬೀಡೆ
ನಿನ್ನ ಸೇವೆಗೈಯದವ ಹೊಲ್ಲ
ಸಾಹಿತ್ಯ – ಪು.ತಿ.ನ
ಸಂಗೀತ – ಮೈಸೂರು ಅನಂತಸ್ವಾಮಿ
ಗಾಯನ – ಎಂ ಡಿ ಪಲ್ಲವಿ