click to play
ಈ ದಿನಾಂತ ಸಮಯದಲಿ
ಉಪವನ ಏಕಾಂತದಲಿ
ಗೋಧೂಳಿ ಹೊನ್ನಿನಲಿ
ಬರದೆ ಹೋದೆ ನೀನು
ಮರೆತು ಹೋದೆ ನೀನು || ಈ ದಿನಾಂತ ||
ನಾ ಬಿಸುಸುಯ್ಯುವ ಹಂಬಲವೋ
ಶುಭ ಸಮ್ಮಿಲನದ ಕಾತರವೋ
ಬಾ ಇನಿಯ ಕರೆವೆ ನೊಂದು
ಬರದೆ ಹೋದೆ ನೀನು
ಮರೆತು ಹೋದೆ ನೀನು || ಈ ದಿನಾಂತ ||
ತನುಮನದಲಿ ನೀನೇ ನೆಲೆಸಿ
ಕಣಕಣವೂ ನಿನ್ನ ಕನಸಿ
ಕಣ್ಣು ಹನಿದು ಕರೆವೆ ನಿನ್ನ
ಬರದೆ ಹೋದೆ ನೀನು
ಮರೆತು ಹೋದೆ ನೀನು || ಈ ದಿನಾಂತ ||
ಇಳೆಗಿಳಿದಿದೆ ಇರುಳ ನೆರಳು
ದನಿ ಕಳೆದಿದೆ ಹಕ್ಕಿಗೊರಳು
ಶಶಿ ಮೆರೆಸಿರೆ ತೋರು ಬೆರಳು
ಬರದೆ ಹೋದೆ ನೀನು
ಮರೆತು ಹೋದೆ ನೀನು || ಈ ದಿನಾಂತ ||
ಹಗಲಿರುಳಿನ ಈ ನಿರೀಕ್ಷೆ
ಈ ಯಾಚನೆ ಪ್ರಣಯ ಭಿಕ್ಷೆ
ಮೊರೆಯಾಲಿಸಿ ಕಳೆಯೆ ಶಿಕ್ಷೆ
ಬರದೆ ಹೋದೆ ನೀನು
ಮರೆತು ಹೋದೆ ನೀನು || ಈ ದಿನಾಂತ ||
ಸಾಹಿತ್ಯ – ಕೆ. ಎಸ್. ನಿಸಾರ್ ಅಹಮದ್
ಸಂಗೀತ – ಸಿ ಅಶ್ವಥ್
ಗಾಯನ – ನರಸಿಂಹ ನಾಯಕ್ / ಇಂದು ವಿಶ್ವನಾಥ್
download ee dinaanta samayadali